ಅಂಬೇಡ್ಕರ್ ಗೆ ಅವಮಾನ ಘಟನೆ: ನ್ಯಾಯಾಧೀಶ ವರ್ಗಾವಣೆ

546

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಗಣರಾಜ್ಯೋತ್ಸವ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಫೋಟೋ ತೆಗೆಸಿ ಅವಮಾನ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ವರ್ಗಾವಣೆ ಮಾಡಲಾಗಿದೆ.

ಹೈಕೋರ್ಟ್ ರಿಜಿಸ್ಟರ್ ಜನರಲ್ ಟಿ.ಜಿ ಶಿವಶಂಕರಗೌಡ ಅವರು ಈ ಕುರಿತು ಅಧಿಸೂಚನೆ ಹೊರಡಿಸಿದ್ದಾರೆ. ಬೆಂಗಳೂರಿನ ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ ನ್ಯಾಯಮಂಡಳಿ ಅಧ್ಯಕ್ಷರಾಗಿ ವರ್ಗಾವಣೆ ಮಾಡಲಾಗಿದೆ. ಜನವರಿ 26ರಂದು ನಡೆದ ಘಟನೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿವೆ. ಇಂದು ಸಹ ರ್ಯಾಲಿ ನಡೆಸಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!