ಪ್ರಜಾಸ್ತ್ರ ಸುದ್ದಿ
ಚಿತ್ರದುರ್ಗ: ನಿಂತಿದ್ದ ಲಾರಿಗೆ ಆಂಬ್ಯುಲೆನ್ಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಕೋಟೆನಾಡಿನಲ್ಲಿ ನಡೆದಿದೆ. ತಾಲೂಕಿನ ಮಲ್ಲಾಪುರ ಹತ್ತಿರ ನಡೆದ ಅಪಘಾತದಲ್ಲಿ ಆಂಬ್ಯುಲೆನ್ಸ್ ಚಾಲಕ ಸೇರಿ ಮೂವರು ಸಾವನ್ನಪ್ಪಿದ್ದಾರೆ.
ಕನಕಮಣಿ(72), ಆಕಾಶ್(17) ಹಾಗೂ ಚಾಲಕ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗುಜರಾತಿನಿಂದ ತಮಿಳುನಾಡಿಗೆ ಹೊರಟಿದ್ದಾಗ ಅಪಘಾತ ನಡೆದಿದೆ. ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.