ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಬಹುಭಾಷಾ ನಟ, ಕನ್ನಡಿಗ ಪ್ರಕಾಶ್ ರಾಜ್ ಅವರು ಚಾಮರಾಜನಗರ ಜಿಲ್ಲೆ ಹನ್ನೂರು ತಾಲೂಕಿನ ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ಆಂಬ್ಯುಲೆನ್ಸ್ ನೀಡಿದ್ದಾರೆ. ಆಂಬ್ಯುಲೆನ್ಸ್ ಹಸ್ತಾಂತರ ಕಾರ್ಯ ಬೆಂಗಳೂರಿನಲ್ಲಿ ನಡೆದಿದೆ.
ಕಳೆದ ವರ್ಷ ಚಾಮರಾಜನಗರ ಜಿಲ್ಲೆಯ ಕಿಚ್ಚುಗತ್ತಿ ಮಾರಮ್ಮ ದೇವಾಲಯದ ವಿಷ ಪ್ರಸಾದ ದುರಂತದಲ್ಲಿ ಅನೇಕರ ಸಾವು, ನೋವುಗಳು ಸಂಭವಿಸಿದವು. ಈ ವೇಳೆ ಹೋಲಿಕ್ರಾಸ್ ಆಸ್ಪತ್ರೆಗೆ ದೊಡ್ಡ ಮಟ್ಟದಲ್ಲಿ ವೈದ್ಯಕೀಯ ಸೇವೆ ನೀಡಿದೆ. ಹೀಗಾಗಿ ಗುಡ್ಡಗಾಡು ಪ್ರದೇಶದ ಜನರಿಗೆ ಅನುಕೂಲವಾಗಲೆಂದು ಆಂಬ್ಯುಲೆನ್ಸ್ ನೀಡಲಾಗಿದೆ.
ಈ ಕುರಿತು ಆಸ್ಪತ್ರೆಯ ಆಡಳಿತಾಧಿಕಾರಿ ಸಿಸ್ಟರ್ ಡೆಲಿನಾ, ನಮ್ಮ ಆಸ್ಪತ್ರೆ ಸೇವೆ ಗುರುತಿಸಿ ತುರ್ತು ಸೇವೆ ವಾಹನ ನೀಡಿದ್ದು, ಅದನ್ನು ಸದುಪಯೋಗ ಮಾಡಿಕೊಳ್ಳುತ್ತೇವೆ. ಆಂಬ್ಯುಲೆನ್ಸ್ ನೀಡಿದ ಪ್ರಕಾಶ್ ರಾಜ್ ಅವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.