ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮಂಡ್ಯದ ಜನ ಸಂಕಲ್ಪ ಸಮಾವೇಶದಲ್ಲಿ ಶುಕ್ರವಾರ ಮಾತನಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಬಂದರೆ ಹೈಕಮಾಂಡ್ ಗೆ ಎಟಿಎಂ ಆಗುತ್ತೆ. ಜೆಡಿಎಸ್ ಬಂದರೆ ಕುಟುಂಬಕ್ಕೆ ಎಟಿಎಂ ಆಗುತ್ತೆ ಎಂದು ವಾಗ್ದಾಳಿ ನಡೆಸಿದ್ದರು. ಇದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಯಾರೆಲ್ಲ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ. ಯಾರ ಕುಟುಂಬದಿಂದ ಎಷ್ಟು ಜನ ರಾಜಕಾರಣಿಗಳು ಇದ್ದಾರೆ ಅನ್ನೋದರ ಪಟ್ಟಿ ಹಾಕಿದ್ದಾರೆ. ಜೊತೆಗೆ ಇದು ಅಪೂರ್ಣ, ರಾಷ್ಟ್ರ ಮಟ್ಟದಲ್ಲಿ ಕೇಳಿದರೆ ಕೊಡುತ್ತೀವಿ ಎಂದಿದ್ದಾರೆ. ಅಲ್ಲದೇ ನಿಮ್ಮ ಮಗ ಜಯ ಶಾ ಯಾವ ಸೀಮೆ ಕ್ರಿಕೆಟ್ ಪಂಡಿತರು ಎಂದು ಬಿಸಿಸಿಐನಲ್ಲಿ ಕೂತಿದ್ದಾರೆ? ಬಿಸಿಸಿಐನಲ್ಲಿ ಯಾರು ಇರಬೇಕು ಯಾರು ಇರಬಾರದು ಎಂದು ಸುಪ್ರೀಂ ಕೋರ್ಟ್ ನ ಸ್ಪಷ್ಟ ಆದೇಶವಿದೆ. ಆ ಆದೇಶಕ್ಕೆ ನಿಮ್ಮ ಮಗ ಅತೀತರೆ? ಬಿಸಿಸಿಐ ಯಾರ ಪಾಲಿನ ಎಟಿಎಂ ಎಂದು ವಾಗ್ದಾಳಿ ನಡೆಸಿದ್ದಾರೆ.