ಹುಬ್ಬಳ್ಳಿಗೆ ಅಮಿತ ಶಾ ಆಗಮನ: ಎಸ್ ಡಿಪಿಐ ಪ್ರತಿಭಟನೆ

356

ಬೆಂಗಳೂರು/ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಹಾಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ ಶಾ ಅವರನ್ನ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಸಚಿವ ಸಂಪುಟದ ಸಹದ್ಯೋಗಿಗಳು ಸ್ವಾಗತಿಸಿದ್ದಾರೆ. ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ, ಸಿಎಂ, ಡಿಸಿಎಂ ಅಶ್ವಥನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವಸತಿ ಸಚಿವ ವಿ.ಸೋಮಣ್ಣ, ಸಿ.ಟಿ ರವಿ ಸೇರಿದಂತೆ ಅನೇಕರು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.

ನಂತರ ಅರಮನೆ ಮೈದಾನದ ಕೃಷ್ಣವಿಹಾರದಲ್ಲಿ ನಡೆದ ವಿವೇಕ ದೀಪಿನಿ ಮಹಾಸಮರ್ಪಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ರು. ಇದಾದ್ಮೇಲೆ ಕೆಲ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹುಬ್ಬಳ್ಳಿಯತ್ತ ಪಯಣ ಬೆಳಸಿದ್ದಾರೆ. ಹುಬ್ಬಳ್ಳಿಯಲ್ಲಿ ಎಸ್ ಡಿಪಿಐ ಸಂಘಟನೆ ವತಿಯಿಂದ ಗೋ ಬ್ಯಾಕ್ ಅಮಿತ ಶಾ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗ್ತಿದೆ. ಈ ವೇಳೆ ಪ್ರತಿಭಟನಾಕಾರರನ್ನ ಬಂಧಿಸಲಾಗಿದೆ.

ಪೌರತ್ವ ಜನಜಾಗೃತಿ ಕುರಿತು ಕಾರ್ಯಕ್ರಮ ಮಾಡಲಾಗ್ತಿದೆ. ಸಿಎಎ ಹಾಗೂ ಎನ್ಆರ್ ಸಿ ಕಾಯ್ದೆಗೆ ಸಂಬಂಧಿಸಿದಂತೆ ಎಸ್ ಡಿಪಿಐ ವತಿಯಿಂದ ಪ್ರತಿಭಟನೆ ನಡೆಸಲಾಗ್ತಿದೆ. ಸಿಎಂ ಹಾಗೂ ಕೇಂದ್ರ ಗೃಹ ಸಚಿವರಿಗೆ ಕಪ್ಪು ಬಾವುಟ ತೋರಿಸುತ್ತೇವೆ ಅಂತಾ ಹೇಳ್ತಿದ್ದಾರೆ. ಈಗಾಗ್ಲೇ 10ಕ್ಕೂ ಜನರನ್ನ ಬಂಧಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!