ಹೃದಯಾಘಾತದಿಂದ ಆಂಧ್ರ ಸಚಿವ ನಿಧನ

229

ಪ್ರಜಾಸ್ತ್ರ ಸುದ್ದಿ

ವಿಜಯವಾಡ: ಹಠಾತ್ ಹೃದಯಾಘಾತದಿಂದಾಗಿ ಆಂಧ್ರದ ಕೈಗಾರಿಕ ಖಾತೆ ಸಚಿವ ಮೇಕಪತಿ ಗೌತಮ್ ರೆಡ್ಡಿ(50) ಸೋಮವಾರ ನಿಧನರಾಗಿದ್ದಾರೆ. ಬೆಳಗ್ಗೆ ಅಸ್ವಸ್ಥರಾದಂತೆ ಕಂಡಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.

ಸಚಿವ ಮೇಕಪತಿ ಗೌತಮ್ ರೆಡ್ಡಿ ನಿಧನಕ್ಕೆ ಸಿಎಂ ವೈ.ಎಸ್ ಜಗನ್ ಮೋಹನ್ ರೆಡ್ಡಿ ಸಂತಾಪ ಸೂಚಿಸಿದ್ದಾರೆ. ನೆಲ್ಲೂರು ಜಿಲ್ಲೆಯ ಆತ್ಮಕೂರು ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದರು. ಮಾಜಿ ಸಂಸದ ಮೇಕಪತಿ ರಾಜಮೋಹನ್ ರೆಡ್ಡಿ ಅವರ ಮಗನಾಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!