ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ

108

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಆಂದ್ರಪ್ರದೇಶ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದೆ. ಕೌಶಲ್ಯ ಅಭಿವೃದ್ಧಿಯಲ್ಲಿ ನಡೆದಿದೆ ಎಂದು ಹೇಳಲಾಗುತ್ತಿರುವ ಹಗರಣ ಸಂಬಂಧ ಮಾಜಿ ಸಿಎಂ ಬಂಧನವಾಗಿದೆ.

ಈ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಎ-1 ಆರೋಪಿಯಾಗಿದ್ದಾರೆ. ಹಗರಣದ ಬಗ್ಗೆ ತನಿಖೆ ನಡೆಸಲು ಸಿಎಂ ಜಗನ್ ಮೋಹನ್ ರೆಡ್ಡಿ ಸಿಐಡಿಗೆ ನೀಡಿದ್ದರು. ನಿನ್ನೆ ತಡರಾತ್ರಿ ಚಂದ್ರಬಾಬು ನಾಯ್ಡು ಅವರನ್ನ ಪೊಲೀಸರು ಬಂಧಿಸಿದ್ದಾರೆ.

ಕೌಶಲ್ಯ ಅಭಿವೃದ್ದಿಯಲ್ಲಿ 371 ಕೋಟಿ ರೂಪಾಯಿ ಹಗರಣ ನಡೆದಿದೆ ಅನ್ನೋ ಆರೋಪ ಕೇಳಿ ಬಂದಿದೆ. ಹೈಕೋರ್ಟ್ ಸೂಚನೆ ಮೇರೆಗೆ ಚಂದ್ರಬಾಬು ನಾಯ್ಡು ಅವರನ್ನು ಮಧ್ಯರಾತ್ರಿ ನಂದಿಯಾಲ್ ಆರ್ ಕೆ ಫಂಕ್ಷನ್ ಹಾಲ್ ನಲ್ಲಿ ಬಂಧಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!