ರಾತ್ರೋರಾತ್ರಿ ಜೆಡಿಎಸ್ ಟಿಕೆಟ್ ಬದಲಾವಣೆ: ಬಳ್ಳಾರಿಯಲ್ಲಿ ಲಾಡ್ ಸ್ಪರ್ಧೆ

109

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್ ನಲ್ಲಿ ಟಿಕೆಟ್ ಸಿಗದೆ ಇರುವ ಕಾರಣಕ್ಕೆ ಅನಿಲ್ ಲಾಡ್ ಬಂಡಾಯವೆದ್ದಿದ್ದಾರೆ. ಹೀಗಾಗಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಅನಿಲ್ ಲಾಡ್ ಸೇರ್ಪಡೆಯಿಂದಾಗಿ ರಾತ್ರೋರಾತ್ರಿ ಜೆಡಿಎಸ್ ಅಭ್ಯರ್ಥಿ ಬದಲಾವಣೆಯಾಗಿದೆ.

ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಕೆಳದ ವಾರ ಪ್ರಕಟವಾದ ಪಟ್ಟಿಯಲ್ಲಿ ಮುನ್ನಾಭಾಯಿ ಅವರಿಗೆ ಜೆಡಿಎಸ್ ಟಿಕೆಟ್ ಘೋಷಿಸಿತ್ತು. ಈಗ ನೋಡಿದರೆ ಮಂಗಳವಾರ ರಾತ್ರಿ ಅನಿಲ್ ಲಾಡ್ ಗೆ ಟಿಕೆಟ್ ನೀಡಲಾಗಿದೆ. ಈ ಮೂಲಕ ಕೊನೆ ಕ್ಷಣದಲ್ಲಿಯೂ ಅಭ್ಯರ್ಥಿಗಳ ಬದಲಾವಣೆ ಸಾಧ್ಯ ಎನ್ನವಂತಾಗಿದೆ.

ಬಳ್ಳಾರಿ ನಗರ ಕ್ಷೇತ್ರದಿಂದ ಭರತ್ ರೆಡ್ಡಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಇದರಿಂದಾಗಿ ಅಸಮಾಧಾನಗೊಂಡು ಬಂಡಾಯವೆದ್ದಿದ್ದಾರೆ. ಎರಡು ಬಾರಿ ಶಾಸಕರಾಗಿ, ಒಮ್ಮೆ ರಾಜ್ಯಸಭಾ ಸದಸ್ಯರಾಗಿರುವ ಅನಿಲ್ ಲಾಡ್ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!