ಅಕ್ಕಿ ಬರಲ್ಲಂತ ಕುಂಟು ನೆಪ ಹೇಳುತ್ತಿದ್ದಾರೆ: ಬೊಮ್ಮಾಯಿ

170

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: ಕಾಂಗ್ರೆಸ್ ಜನಪ್ರಿಯತೆ ಬಹಳ ದಿನ ಉಳಿಯಲ್ಲ. ಅಕ್ಕಿ ವಿಚಾರವಾಗಿ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕಿತ್ತು. ಅದನ್ನು ಬಿಟ್ಟು ಕುಂಟು ನೆಪ ಹೇಳುತ್ತಿದ್ದಾರೆ ಅಂತಾ ಮಾಜಿ ಸಿಎಂ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು.

ಛಬ್ಬಿಯಲ್ಲಿ ನೂತನ ಶಾಲೆಯ ಕಟ್ಟಡದ ಭೂಮಿ ಪೂಜೆ ಮಾಡಿ ಮಾತನಾಡಿದ ಅವರು, ಛತ್ತೀಸಗಡದಿಂದ ಅಕ್ಕಿ ತರುತ್ತೇವೆ ಅಂತಿದ್ದಾರೆ. ರಾಜ್ಯದ ರೈತರು ಅಕ್ಕಿ ಕೊಡಲು ಮುಂದೆ ಬಂದರೆ ಮೊದಲ ಪ್ರಾಶಸ್ತ್ಯ ಕೊಡಬೇಕು. ಅದನ್ನು ಬಿಟ್ಟು ಬಿಜೆಪಿಯವರೇ ಅಕ್ಕಿ ಕೊಡಿಸಲಿ ಅನ್ನೋದು ಸರಿಯಲ್ಲ.

ಇನ್ನು ಯಾವೆಲ್ಲ ತಾಲೂಕಿನಲ್ಲಿ ಮಳೆ ಕೊರತೆಯಾಗಿದೆಯೋ, ಕುಡಿಯುವ ನೀರಿನ ಸಮಸ್ಯೆ ಇದೆಯೋ ಅಲ್ಲಿ ಶಾಸಕರ ನೇತೃತ್ವದಲ್ಲಿ ಟಾಸ್ಕ್ ಪೋರ್ಸ್ ರಚನೆ ಮಾಡಬೇಕು. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಬರೀ ವಿಡಿಯೋ ಕಾನ್ಫ್ ರೆನ್ಸ್ ಮಾಡಿದರೆ ನಡೆಯಲ್ಲ ಅಂತಾ ಹೇಳಿದರು.




Leave a Reply

Your email address will not be published. Required fields are marked *

error: Content is protected !!