ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಅನ್ನ ಭಾಗ್ಯ ಯೋಜನೆ ಜಾರಿಗೆ ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಸರ್ಕಾರ, ಕೇಂದ್ರದಿಂದ ಅಕ್ಕಿ ನೀಡುತ್ತಿಲ್ಲ ಅನ್ನೋ ಗಂಭೀರ ಆರೋಪ ಮಾಡಿದೆ. ಇದು ಕಳೆದೊಂದು ವಾರದಿಂದ ಆರೋಪ, ಪ್ರತ್ಯಾರೋಪದ ಭರಾಟೆ ಜೋರಾಗಿದೆ. ಹೀಗಾಗಿ ಇಂದು ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರೆಳಿದ್ದು, ಕೇಂದ್ರ ನಾಯಕರನ್ನು ಭೇಟಿಯಾಗಲಿದ್ದಾರೆ ಅಂತಾ ಹೇಳಲಾಗುತ್ತಿದೆ.
ಸಿಎಂ ಸಿದ್ದರಾಮಯ್ಯನವರ ಪತ್ನಿ ಆರೋಗ್ಯದಲ್ಲಿ ಒಂದಿಷ್ಟು ಸಮಸ್ಯೆ ಕಂಡುಬಂದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರನ್ನು ಭೇಟಿಯಾಗಿ ಆರೋಗ್ಯ ವಿಚಾರಿ, ಇಂದು ಮಧ್ಯಾಹ್ನ ದೆಹಲಿಗೆ ತೆರೆಳದಿದ್ದಾರೆ. ಅಲ್ಲಿ ರಾಷ್ಟ್ರಪತಿ, ಕೇಂದ್ರ ಸಚಿವರನ್ನು ಭೇಟಿಯಾಗಿ ಚರ್ಚಿಸಲಿದ್ದಾರಂತೆ. ಸಿಎಂ ಜೊತೆಗೆ ಸಚಿವರಾದ ಜಮೀರ್ ಅಹ್ಮದ್, ಭೈರತಿ ಸುರೇಶ್ ತೆರಳಿದ್ದಾರೆ.