ಕೇಂದ್ರಕ್ಕೆ ನಾವು ಪುಕ್ಸಟ್ಟೆ ಅಕ್ಕಿ ಕೊಡಿ ಎಂದಿಲ್ಲ: ಡಿಸಿಎಂ ಡಿಕೆಶಿ

222

ಪ್ರಜಾಸ್ತ್ರ ಸುದ್ದಿ

ಮೈಸೂರು: ಅನ್ನ ಭಾಗ್ಯ ಯೋಜನೆ ಸಂಬಂಧ ಕೇಂದ್ರದಿಂದ ಅಕ್ಕಿ ಪಡೆಯಲು ಮುಂದಾಗಿದ್ದ ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಅಕ್ಕಿ ಕೊಡುವುದಿಲ್ಲವೆಂದು ರಾಜ್ಯಕ್ಕೆ ಕೇಂದ್ರ ಸರ್ಕಾರ ಪತ್ರ ಬರೆದಿದೆ. ಈ ಧೋರಣೆ ಖಂಡಿಸಿ ಮುಂದಿನ ದಿನಗಳಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದರು.

ನೀವು ಯಾವ ರೀತಿ ಅಕ್ಕಿ ಕೊಡುತ್ತಿದ್ದರೋ ಅದೆ ರೀತಿ ಕೊಡಿ ಎಂದು ಕೇಳಿದ್ದೇವು. ಪುಕ್ಸಟ್ಟೆ ಕೇಳಿರಲಿಲ್ಲ. ನಾವು 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದೇವೆ. ಅದರಂತೆ ನಮ್ಮ ಮುಖ್ಯಮಂತ್ರಿಗಳು ಬೇರೆ ರಾಜ್ಯಗಳ ಸಿಎಂಗಳ ಜೊತೆ ಮಾತನಾಡಿ ಅಕ್ಕಿ ಖರೀದಿಸಲು ಮುಂದಾಗಿದ್ದಾರೆ. ಈ ತಾರತಮ್ಯ ನೀತಿಯನ್ನು ಖಂಡಿಸಿ ಮುಂದಿನ ದಿನಗಳಲ್ಲಿ ಹೋರಾಟ ಮಾಡುತ್ತೇವೆ ಅಂತಾ ವಾಗ್ದಾಳಿ ನಡೆಸಿದರು.




Leave a Reply

Your email address will not be published. Required fields are marked *

error: Content is protected !!