ಪ್ರಜಾಸ್ತ್ರ ಸುದ್ದಿ
ಮುಂಬೈ: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ, ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಜನವರಿ 30ರಂದು ಗಾಂಧಿಜೀ ಪುಣ್ಯತಿಥಿಯಂದು ಉಪವಾಸ ಸತ್ಯಾಗ್ರಹ ಪ್ರಾರಂಭಿಸುವುದಾಗಿ ಹೇಳಿದ್ದರು. ಇದೀಗ ಇದರಿಂದ ಹಿಂದಕ್ಕೆ ಸರಿದಿದ್ದಾರೆ.
ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನಾವಿಸ್ ಸೇರಿದಂತೆ ಬಿಜೆಪಿ ಮುಖಂಡರು ಅಣ್ಣಾ ಹಜಾರೆ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುತ್ತೆ. ನಿಮ್ಮ ಬೇಡಿಕೆಗಳನ್ನ ಈಡೇರಿಸಲಾಗುತ್ತೆ ಅನ್ನೋ ಭರವಸೆ ನೀಡಿದ್ದಾರಂತೆ. ಹೀಗಾಗಿ ನಾನು ಉಪವಾಸ ಸತ್ಯಾಗ್ರಹ ಮಾಡುತ್ತಿಲ್ಲವೆಂದು 83 ವರ್ಷದ ಹಿರಿಯ ಸಾಮಾಜಿಕ ಹೋರಾಟಗಾರ ತಿಳಿಸಿದ್ದಾರೆ.