ಜ.16ಕ್ಕೆ ಕೆಆರ್ ಪಿ ಪಕ್ಷದ ಅಭ್ಯರ್ಥಿಗಳ ಘೋಷಣೆ!

200

ಪ್ರಜಾಸ್ತ್ರ ಸುದ್ದಿ

ಬೆಂಗಳೂರು:  ಮಾಜಿ ಸಚಿವ ಜನಾರ್ದನ್ ರೆಡ್ಡಿ ಸ್ಥಾಪಿಸಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ವತಿಯಿಂದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಜನವರಿ 16ಕ್ಕೆ ಬಿಡುಗಡೆಯಾಗಲಿದೆ. ಮೊದಲ ಹಂತದಲ್ಲಿ 25 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಲಿದ್ದಾರಂತೆ.

ಉತ್ತರ ಕರ್ನಾಟಕದಿಂದ 64 ಹಾಗೂ ದಕ್ಷಿಣ ಕರ್ನಾಟಕದಿಂದ 38 ಸೇರಿದಂತೆ  103 ಕ್ಷೇತ್ರಗಳಲ್ಲಿ ಕೆಆರ್ ಪಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಜನಾರ್ದನ್ ರೆಡ್ಡಿ ಗಂಗಾವತಿ, ಪತ್ನಿ ಅರುಣಾಲಕ್ಷ್ಮಿ ಅವರು ಸಹ ಬಳ್ಳಾರಿ ಗಡಿ ಭಾಗದಿಂದ ಸ್ಪರ್ಧಿಸಲಿದ್ದಾರಂತೆ. ಒಎಂಸಿ ಎಂಡಿ ಬಿ.ವಿ ಶ್ರೀನಿವಾಸ್ ರೆಡ್ಡಿ ಕೊಪ್ಪಳದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!