ರಾಜ್ಯದ ಪೊಲೀಸರಿಗೆ ಬೆಳ್ಳಿ ಪದಕ, ವೈದ್ಯಕೀಯ ವೆಚ್ಚ ಏರಿಕೆ

157

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಗರದಲ್ಲಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶ ನಡೆಯಿತು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಎಲ್ಲ ಪೊಲೀಸರಿಗೆ ಬೆಳ್ಳಿ ಪದಕ ಹಾಗೂ ವೈದ್ಯಕ ವೆಚ್ಚ 1 ಸಾವಿರದಿಂದ 1,500 ರೂಪಾಯಿಗೆ ಏರಿಕೆ ಮಾಡಲಾಗುವುದು ಎಂದು ಘೋಷಿಸಿದರು.

ಭವ್ಯವಾದ ಹಾಗೂ ಸುಸಜ್ಜಿತ ಸುವರ್ಣ ಪೊಲೀಸ್ ಭವನ ನಿರ್ಮಿಸಲಾಗುವುದು. ಸಿಇಎನ್ ಠಾಣಾಧಿಕಾರಿಗಳನ್ನು ಎಸಿಪಿ ಹಾಗೂ ಡಿಸಿಪಿ ಮಟ್ಟಕ್ಕೆ ಉನ್ನತೀಕರಿಸಲಾಗುವುದು. ಬೆಂಗಳೂರು ನಗರದಲ್ಲಿ 8 ಹೆಚ್ಚುವರಿ ಅಡಿಷನಲ್ ಡಿಸಿಪಿ ಹುದ್ದೆಗಳನ್ನು ಸೃಜಿಸಲಾಗುವುದು ಎಂದರು. ನಮ್ಮ ಸರ್ಕಾರ ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಟ್ಟಿದೆ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು. ಶೋಷಿತರ ಮೇಲಿನ ದೌರ್ಜನ್ಯದ ಪ್ರಕರಣಗಳ ತನಿಖೆಯ ಗುಣಮಟ್ಟ ಹೆಚ್ಚಿಸಬೇಕು ಅಂತಾ ಸಲಹೆ ನೀಡಿದರು.

ಈ ವೇಳೆ ಗೃಹ ಸಚಿವ ಜಿ.ಪರಮೇಶ್ವರ್, ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.




Leave a Reply

Your email address will not be published. Required fields are marked *

error: Content is protected !!