ರೈತರ ಬಗ್ಗೆ ಯಾಕೆ ನಿಮಗಿಷ್ಟು ದ್ವೇಷ?, ಪ್ರಧಾನಿಗೆ ಸಿದ್ದರಾಮಯ್ಯ ಪ್ರಶ್ನೆ

138

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ಸಂಬಂಧ ಸಿಲಿಕಾನ್ ಸಿಟಿಗೆ ಬಂದಿರುವ ಪ್ರಧಾನಿ ಮೋದಿ ಅವರನ್ನು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ರೈತರ ಬಗ್ಗೆ ಯಾಕೆ ನಿಮಗಿಷ್ಟು ದ್ವೇಷ ಎಂದು ಪ್ರಶ್ನಿಸಿದ್ದಾರೆ.

ರೈತರ ಆದಾಯ ದುಪ್ಪಟ್ಟುಗೊಳಿಸುತ್ತೇನೆ ಎಂದು ಬುರುಡೆಬಿಟ್ಟು ಅಧಿಕಾರಕ್ಕೆ ಬಂದಿರುವ ನರೇಂದ್ರ ಮೋದಿಯವರು ಮಾಡಿದ್ದೇನು ಗೊತ್ತಾ? ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ರಸಗೊಬ್ಬರದ ಮೇಲಿನ ಸಬ್ಸಿಡಿಯನ್ನು 50,121 ಕೋಟಿಯಷ್ಟು ಕಡಿಮೆ ಮಾಡಿದ್ದಾರೆ. ರೈತರ ಬಗ್ಗೆ ಯಾಕೆ ನಿಮಗಿಷ್ಟು ದ್ವೇಷ?, ಉತ್ತರ ಕೊಡಿ ಮೋದಿ ಎಂದು ಟ್ವೀಟ್ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!