ಮುಂಬೈ: ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತ್ನಾಡಿದ್ದ ಕೇಂದ್ರ ಸಚಿವ ಅನೂರಾಗ್ ಠಾಕೂರ್, ದೇಶದ್ರೋಹಿಗಳನ್ನ ಗುಂಡಿಕ್ಕಿ ಕೊಲ್ಲಬೇಕು ಅನ್ನೋ ವಿವಾದಾತ್ಮಕ ಹೇಳಿಕೆ ನೀಡಿದ್ರು. ಇದಕ್ಕೆ ಎಐಎಂಇಐಎಂ ಅಧ್ಯಕ್ಷ ಓವೈಸಿ ತಿರುಗೇಟು ನೀಡಿದ್ದಾರೆ.
ನಿಮ್ಮ ಹೇಳಿಕೆಯಿಂದ ನಮ್ಗೇನು ಭಯವಿಲ್ಲ. ನಮ್ಮ ಸಹೋದರಿಯರು ಪ್ರತಿಭಟನೆಗೆ ಮುಂದಾಗಿದ್ದಾರೆ. ತಮ್ಮ ದೇಶ ಉಳಿಸಿಕೊಳ್ಳಲು ಹೋರಾಡ್ತಿದ್ದಾರೆ. ಇದಕ್ಕಾಗಿ ಗಟ್ಟಿ ನಿರ್ಧಾರ ಮಾಡಿದ್ದಾರೆ. ಎಲ್ಲಿ ಶೂಟ್ ಮಾಡ್ತೀರಿ ಹೇಳಿ ಅಲ್ಲಿಗೆ ಬರುತ್ತೇನೆ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.