ಸಾಲ ತೀರಿಸದ ಜಾರಕಿಹೊಳಿ, ಹೆಬ್ಬಾಳಕರ್,ಕಾಶೆಂಪುರ್

351

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ, ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಜೆಡಿಎಸ್ ಶಾಸಕ ಬಂಡೆಪ್ಪ ಕಾಶೆಂಪುರ್ ಸೇರಿದಂತೆ 24 ಜನರು ಅಪೆಕ್ಸ್ ಬ್ಯಾಂಕ್ ನಲ್ಲಿ ಪಡೆದ ಸಾಲ ತೀರಿಸಿಲ್ಲ ಎಂದು, ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ.

ಜೆಡಿಎಸ್ ಶಾಸಕ ಬಂಡೆಪ್ಪ ಕಾಶೆಂಪುರ್

ರಾಜ್ಯದ ಸುಮಾರು 24 ಜನರು 6 ಸಾವಿರ ಕೋಟಿ ಸಾಲ ಪಡೆದಿದ್ದಾರೆ. ಸಾಲ ಬಾಕಿ ಉಳಿಸಿಕೊಡವರಿಗೆ ನೋಟಿಸ್ ನೀಡಲಾಗಿದೆ. ಕೆಲವರು ತುಮಕೂರು, ದಕ್ಷಿಣ ಕನ್ನಡ ಸೇರಿದಂತೆ ಡಿಸಿಸಿ ಬ್ಯಾಂಕ್ ಗಳಿಂದ ಸಾಲ ಪಡೆದಿದ್ದಾರೆ. ಅಸಲು, ಬಡ್ಡಿ ಎರಡನ್ನೂ ಕಟ್ಟಿಲ್ಲ. ವಸೂಲಾತಿಗೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಯಾರು ಎಷ್ಟು ಕೋಟಿ ಸಾಲ ಪಡೆದಿದ್ದಾರೆ ಅನ್ನೋದು ಸಾರ್ವಜನಿಕ ವೇದಿಕೆಯಲ್ಲಿ ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!