ಅಕಾಡೆಮಿ, ಪ್ರಾಧಿಕಾರಿಗಳಿಗೆ ಅಧ್ಯಕ್ಷರು, ಸದಸ್ಯರ ನೇಮಕ

222

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಿಗಳಿಗೆ ಅಧ್ಯಕ್ಷರನ್ನು ಹಾಗೂ ಸದಸ್ಯರನ್ನು ನೇಮಕ ಮಾಡಿ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ಯಾವೆಲ್ಲ ಅಕಾಡೆಮಿ, ಪ್ರಾಧಿಕಾರಗಳಿಗೆ ಅಧ್ಯಕ್ಷರನ್ನು ನೇಮಿಸಲಾಗಿದೆ ಅನ್ನೋದು ಇಲ್ಲಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರ- ಪುರುಷೋತ್ತಮ ಬಿಳಿಮಲೆ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ- ಡಾ.ಚನ್ನಪ್ಪ ಕಟ್ಟಿ, ಕನ್ನಡ ಪುಸ್ತಕ ಪ್ರಾಧಿಕಾರಿ-ಮಾನಸ, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸದಸ್ಯರನ್ನು, ಕರ್ನಾಟಕ ಸಾಹಿತ್ಯ ಅಕಾಡೆಮಿ-ಎಲ್.ಎನ್ ಮುಕಂದರಾಜ್, ಕರ್ನಾಟಕ ನಾಟಕ ಅಕಾಡೆಮಿ-ಕೆ.ವಿ ನಾಗರಾಜಮೂರ್ತಿ, ಕರ್ನಾಟಕ ಸಂಗೀತ, ನೃತ್ಯ ಅಕಾಡೆಮಿ-ಕೃಪಾ ಫಡ್ಕೆ.

ಕರ್ನಾಟಕ ಶಿಲ್ಪಾ ಕಲಾ ಅಕಾಡೆಮಿ-ಎಂ.ಸಿ ರಮೇಶ್, ಕರ್ನಾಟಕ ಲಲಿತಕಲಾ ಅಕಾಡಮಿ-ಪ.ಸ ಕುಮಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ- ತಲ್ಲೂರು ಶಿವರಾಮ್ ಶೆಟ್ಟಿ, ಕರ್ನಾಟಕ ಜಾನಪದ ಅಕಾಡೆಮಿ-ಶಿವಪ್ರಸಾದ ಗೊಲ್ಲಹಳ್ಳಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ-ತಾರಾನಾಥ್ ಗಟ್ಟಿ ಕಾಪಿಕಾಡ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ-ಜೊಕ್ಕಿಂ ಸ್ಟಾನ್ಲಿ ಅಲ್ವಾರಿಸ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ-ಉಮರ್ ಯು.ಎಚ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ- ಸದಾನಂದ ಮಾವಜಿ, ಕರ್ನಾಟಕ ಬಯಲಾಟ ಅಕಾಡೆಮಿ-ಪ್ರೊ.ದುರ್ಗದಾಸ್, ಕರ್ನಾಟಕ ಬಂಜಾರ್ ಅಕಾಡೆಮಿ-ಎ.ಆರ್ ಗೋವಿಂದಸ್ವಾಮಿ ಇವರೆನ್ನಲ್ಲ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಜೊತೆಗೆ ಸದಸ್ಯರನ್ನು ನೇಮಿಸಿ ಆದೇಶಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!