ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮುಂಬರುವ 2023ರ ವಿಧಾನಸಭಾ ಚುನಾವಣೆ ಸಂಬಂಧ ರಾಜಕೀಯ ಪಕ್ಷಗಳ ತಯಾರಿ ಭರ್ಜರಿಯಾಗಿ ನಡೆದಿದೆ. ಹೀಗಾಗಿ ಹಲವು ಮಹತ್ವದ ಬದಲಾವಣೆಗಳನ್ನು ತರಲಾಗುತ್ತಿದೆ. ಕಾಂಗ್ರೆಸ್ ರಾಜ್ಯದ 5 ಜಿಲ್ಲೆಗಳಲ್ಲಿ ಜಿಲ್ಲಾಧ್ಯಕ್ಷರನ್ನು ನೇಮಿಸಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ ಈ ಬಗ್ಗೆ ಆದೇಶ ಹೊರಡಿಸಿದ್ದು, ಬೆಂಗಳೂರು ಗ್ರಾಮಾಂತರ ಸಿ.ಆರ್ ಗೌಡ, ಯಾದಗಿರಿಗೆ ಬಸರೆಡ್ಡಿ, ಧರ್ಮಜ್ ಉತ್ತಪ್ಪ ಕೊಡಗು, ಚಂದ್ರಶೇಖರಗೌಡ ತುಮಕೂರು ಹಾಗೂ ಹಾಸನಗೆ ಇ.ಎಚ್ ಲಕ್ಷ್ಮಣ್ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.