ಪ್ರಜಾಸ್ತ್ರ ಸುದ್ದಿ
ನವದೆಹಲಿ: ಕೇಂದ್ರ ಚುನಾವಣಾ ಆಯೋಗಕ್ಕೆ ನೂತನ ಆಯುಕ್ತರನ್ನು ನೇಮಕ ಮಾಡಲಾಗಿದೆ. ಜ್ಞಾನೇಶ್ ಕುಮಾರ್ ಹಾಗೂ ಸುಖ್ಬೀರ್ ಸಿಂಗ್ ಸಂಧು ಅವರನ್ನು ನೇಮಕ ಮಾಡಲಾಗಿದೆ ಎಂದು ಚುನಾವಣೆ ಆಯುಕ್ತರ ನೇಮಕ ಸಮಿತಿ ಸದಸ್ಯ ಅಧೀರ್ ರಂಜನ್ ಚೌಧರಿ ತಿಳಿಸಿದ್ದಾರೆ.
ಸಮಿತಿ ಮುಂದೆ ಒಟ್ಟು 6 ಹೆಸರಗಳು ಬಂದಿದ್ದವು. ಸಂಧು, ಜ್ಞಾನೇಶ್ ಕುಮಾರ್ ಅಂತಿಮಗೊಳಿಸಲಾಗಿದೆ. ಆಯ್ಕೆ ಸಮಿತಿಯಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಇರಬೇಕಿತ್ತು ಎಂದರೂ ಯಾಕೆ ಇರಲಿಲ್ಲ ಎನ್ನುವುದಕ್ಕೆ ಸ್ಪಷ್ಟತೆ ಸಿಗಲಿಲ್ಲ.