ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಕಾಡಾನೆ ಹಿಡಿಯುವ ಕಾರ್ಯಾಚರಣೆ ವೇಳೆ ಒಂಟಿಯಾಗಿ ಹೋರಾಟ ನಡೆಸಿ ಪ್ರಾಣ ಕಳೆದುಕೊಂಡ ಕ್ಯಾಪ್ಟನ್ ಅರ್ಜುನ ಆನೆಯ ನೆನಪಿನಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಡಾ.ಬಿ.ಆರ್ ಅಂಬೇಡ್ಕರ್ ಅವರ 67ನೇ ಮಹಾಪರಿನಿರ್ವಾಣದ ನಿಮಿತ್ತ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು, 8 ಬಾರಿ ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಸಾವು ದುರದೃಷ್ಟಕರ. ಪ್ರಾಣ ಕಳೆದುಕೊಂಡ ಸ್ಥಳದಲ್ಲಿಯೇ ಸ್ಮಾರಕ ನಿರ್ಮಿಸಲಾಗುತ್ತೆ. ಜೊತೆಗೆ ಹೆಗ್ಗಡದೇವನಕೋಟೆಯಲ್ಲಿ ಸ್ಮಾರಕ ನಿರ್ಮಿಸಲು ಸೂಚಿಸಿದ್ದೇನೆ ಎಂದರು.
ಇನ್ನು ಅಂಬೇಡ್ಕರ್ ಅವರು ಇನ್ನೂ ಇರಬೇಕಿತ್ತು. ಅವರ ಇದ್ದಿದ್ದರೆ ಸಮಾನತೆ ಪರವಾಗಿ ಮತ್ತಷ್ಟು ಹೋರಾಟಗಳು ಆಗುತ್ತಿದ್ದವು. ನಾವೆಲ್ಲರೂ ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕಿದೆ ಅಂತಾ ಹೇಳಿದರು.