ಪ್ರಜಾಸ್ತ್ರ ಸುದ್ದಿ
ಶ್ರೀನಗರ: ಭಾರತ ಹಾಗೂ ಚೀನಾ ನಡುವೆ ಸೃಷ್ಟಿಯಾಗಿರುವ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ, ಭಾರತೀಯ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಲಡಾಕ್ ಗೆ ಭೇಟಿ ನೀಡಿದ್ದಾರೆ. ಕಳೆದ ಒಂದೊವರೆ ತಿಂಗಳಿನಿಂದ ಗಡಿಯಲ್ಲಿ ನಡೆಯುತ್ತಿರುವ ಜಟಾಪಟಿ ಸಂಬಂಧ ಚರ್ಚೆ ನಡೆಸಲಿದ್ದಾರೆ.
ಜೂನ್ 15ರ ರಾತ್ರಿ ಗಾಲ್ವಾನ್ ಕಣಿವೆಯ ವಾಸ್ತವ ಗಡಿರೇಖೆ ಬಳಿ ಚೀನಾ ಸೈನಿಕರು ದಾಳಿ ನಡೆಸಿದ್ರು. ಇದ್ರಿಂದಾಗಿ ಭಾರತದ 20 ಸೈನಿಕರು ಹುತಾತ್ಮರಾದ್ರು. ಅಂದಿನಿಂದ ಗಡಿಯಲ್ಲಿ ಯುದ್ಧದ ಪರಿಸ್ಥಿತಿ ನಿರ್ಮಿಸಿದೆ. ಹೀಗಾಗಿ ಸೇನಾ ಮುಖ್ಯಸ್ಥರು ಭೇಟಿ ನೀಡಿದ್ದು, ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.