ಪ್ರಜಾಸ್ತ್ರ ಸುದ್ದಿ
ರಾಮನಗರ: ಜಾನುವಾರಗಳನ್ನು ಸಾಗಿಸುವಾಗ ಸಾತನೂರು ಹತ್ತಿರ ಇರ್ದಿಷ್ ಪಾಷಾ ಎಂಬಾತ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದ. ಆತನ ಕುಟುಂಬಸ್ಥರು ಪುನೀತ್ ಕೆರೆಹಳ್ಳಿ ವಿರುದ್ಧ ದೂರು ದಾಖಲಿಸಿದ್ದರು. ಈ ಸಂಬಂಧ ಸಾತನೂರು ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಕ್ಯಾಂಟರ್ ನಲ್ಲಿ ಜಾನುವಾರುಗಳನ್ನು ಸಾಗಿಸುವಾಗ ಪುನೀತ್ ಕೆರೆಹಳ್ಳಿ ಹಾಗೂ ಆತನ ತಂಡದವರು ದಾಳಿ ಮಾಡಿ, ತನ್ನ ಮಗನನ್ನು ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿ ದೂರು ನೀಡಿದ್ದಾರೆ. ಜಾನುವಾರಗಳನ್ನು ರಕ್ಷಣೆ ಮಾಡಿದ ಜಾಗದಿಂದ ಸ್ವಲ್ಪ ದೂರದಲ್ಲಿ ಇರ್ದಿಷ್ ಪಾಷಾ ಶವ ಅನುಮಾನಸ್ಪದ ರೀತಿಯಲ್ಲಿ ಪತ್ತೆಯಾಗಿದೆ.
ಶನಿವಾರ ಇರ್ದಿಷ್ ಪಾಷಾ ಕುಟುಂಬಸ್ಥರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದರು. ಈಗ ಪುನೀತ್ ಕೆರೆಹಳ್ಳಿ ಬಂಧನವಾಗಿದ್ದು, ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.