ದೇಶವಿರೋಧಿ ಶಕ್ತಿಗಳನ್ನು ಕಿತ್ತೊಗೆಯಲು ಸಿದ್ಧ: ಸಿಎಂ ಸಿದ್ದರಾಮಯ್ಯ

93

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವಿದ್ವಾಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬುಧವಾರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈಗಾಗ್ಲೇ ಅವರನ್ನು ಕೋರ್ಟ್  ಎದುರು ಹಾಜರು ಪಡಿಸಿ 15 ದಿನ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ದೇಶವಿರೋಧ ಶಕ್ತಿಗಳನ್ನು ಕಿತ್ತೊಗೆಯಲು ಸಿದ್ದರಾಗಿದ್ದೇವೆ ಎಂದಿದ್ದಾರೆ.

ಬೆಂಗಳೂರಲ್ಲಿ ವಿದ್ವಾಂಸಕ ಕೃತವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸುವ ಮೂಲಕ ಸಂಭವಿಸಬಹುದಾಗಿದ್ದ ಭಾರೀ ಅನಾಹುತವನ್ನು ವಿಫಲಗೊಳಿಸಿರುವ ರಾಜ್ಯದ ಸಿಸಿಬಿ ಪೊಲೀಸರಿಗೆ ಅಭಿನಂದನೆಗಳು. ಭಯೋತ್ಪಾದನೆ ಚಟುವಟಿಕೆಗಳು ಸೇರಿದಂತೆ ಯಾವುದೇ ತರನಾದ ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಪತ್ತೆ ಹಚ್ಚಿ ಬೇರು ಸಮೇತ ಅಂತಹ ಶಕ್ತಿಗಳನ್ನು ರಾಜ್ಯದಿಂದ ಕಿತ್ತೊಗೆಯಲು ನಾವು ಸದಾ ಸಿದ್ದರಾಗಿದ್ದೇವೆ. ನಾಡಿನ ಪ್ರತಿಯೊಬ್ಬರೂ ಸುರಕ್ಷತೆಯ ಬದುಕು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!