ನವದೆಹಲಿ: ಕೇಂದ್ರ ಮಾಜಿ ಹಣಕಾಸು ಸಚಿವ ಅರುಣ ಜೇಟ್ಲಿ ಅವರು ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಅಂತಾ ಹೇಳಲಾಗ್ತಿದೆ. ಹೀಗಾಗಿ ಬಿಜೆಪಿ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯದ ಮಾಹಿತಿ ಪಡೆಯುತ್ತಿದ್ದಾರೆ.
ಜೇಟ್ಲಿ ಅವರಿಗೆ ಜೀವರಕ್ಷಕ ಉಪಕರಣಗಳ ಮೂಲಕ ನೆರವು ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕೇಂದ್ರ ಸಚಿವರಾದ ಪಿಯೂಶ ಗೊಯಲ್, ಹರ್ಷವರ್ಧನ, ಬಿಜೆಪಿ ಮುಖಂಡ ಸತೀಶ ಉಪಾದ್ಯಾಯ, ಬಿಹಾರ ಸಿಎಂ ನಿತೀಶಕುಮಾರ, ಕಾಂಗ್ರೆಸ್ ನಾಯಕ ಅಭಿಷೇಕ ಸಿಂಘ್ವಿ, ಜೋತಿರಾದಿತ್ಯ ಸಿಂದಿಯಾ, ಬಿಎಸ್ಪಿ ನಾಯಕಿ ಮಾಯಾವತಿ ಸೇರಿ ಅನೇಕ ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.