ಪ್ರಜಾಸ್ತ್ರ ಸುದ್ದಿ
ಬಳ್ಳಾರಿ: ಬಿಜೆಪಿಯಿಂದ ತನಗೆ ಅನ್ಯಾಯವಾಯಿತು ಎಂದು ಹೊಸ ಪಕ್ಷ ಸ್ಥಾಪನೆ ಮಾಡಿರುವ ಜನಾರ್ಧನ್ ರೆಡ್ಡಿ, ತಮ್ಮನ ವಿರುದ್ಧವೇ ಪತ್ನಿಯನ್ನು ಕಣಕ್ಕೆ ಇಳಿಸಿದ್ದಾರೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಬಳ್ಳಾರಿಯಲ್ಲಿ ಪತ್ನಿ ಅರುಣಾ ಲಕ್ಷ್ಮಿ ಅಭ್ಯರ್ಥಿ ಎಂದು ಘೋಷಿಸಿದ್ದಾರೆ.
ಗಂಗಾವತಿಯ ಆನೆಗುಂದಿಯಲ್ಲಿ ಕಲ್ಯಾಣ ರಥಯಾತ್ರೆಗೆ ಚಾಲನೆ ನೀಡಿದ ಜನಾರ್ಧನ್ ರೆಡ್ಡಿ, ತಮ್ಮ ಹಾಗೂ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಪತ್ನಿ ಅರುಣಾ ಲಕ್ಷ್ಮಿ ಅಭ್ಯರ್ಥಿ ಎಂದು ಘೋಷಿಸಿದ್ದಾರೆ. ಈ ಮೂಲಕ ಬಳ್ಳಾರಿಯಲ್ಲಿ ಸಹೋದರರ ಸವಾಲ್ ನಡೆಯಲಿದೆ.