ಸುಪ್ರೀಂ ಮೊರೆ ಹೋದ ಅರವಿಂದ್ ಕೇಜ್ರಿವಾಲ್

66

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬುಧವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ತಮ್ಮ ಬಂಧನದ ಕ್ರಮವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ಮಂಗಳವಾರ ವಜಾಗೊಳಿಸಲಾಗಿದೆ. ಹೀಗಾಗಿ ಇಂದು ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದ್ದು ಮುಂಜಾನೆ 10.30ರ ಸುಮಾರಿಗೆ ಮುಖ್ಯ ನ್ಯಾಯಮೂರ್ತಿ ಪೀಠದ ಮುಂದೆ ಬರಲಿದೆ ಎಂದು ಎಎಪಿ ಕಾನೂನು ಸೆಲ್ ವಕೀಲ ಸಂಜೀವ್ ನಾಸಿಯಾರ್ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!