ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಲಿಕಾನ್ ಸಿಟಿಯಲ್ಲಿ ಆಶಾ ಕಾರ್ಯಕರ್ತೆಯರು ನಡೆಸ್ತಿದ್ದ ಹೋರಾಟ ಅಂತ್ಯವಾಗಿದೆ. ಸ್ಥಳಕ್ಕೆ ಆಗಮಿಸಿದ ಆರೋಗ್ಯ ಸಚಿವ ಬಿ.ಶ್ರೀರಾಮುಲು, ಶುಕ್ರವಾರ ಸಿಎಂ ಭೇಟಿ ಮಾಡಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನ ಮುಕ್ತಾಯಗೊಳಿಸಲಾಗಿದೆ.
ರಾಜ್ಯದ ಮೂಲೆ ಮೂಲೆಯಿಂದ ಬಂದಿದ್ದ ಸಾವಿರಾರು ಆಶಾ ಕಾರ್ಯಕರ್ತೆಯರು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ರು. ಸಿಎಂ ಬಿ.ಎಸ್ ಯಡಿಯೂರಪ್ಪನವರ ಭೇಟಿಯ ಜೊತೆಗೆ ಅವರ ಬೇಡಿಕೆ ಈಡೇರಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ನಿಲ್ಲಿಸಿದ್ದಾರೆ.