ಅಧಿಕೃತವಾಗಿ ‘ಕೈ’ ಹಿಡಿದ ಅಶೋಕ ಮನಗೂಳಿ

330

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಮ್ಮುಖದಲ್ಲಿ ಅಶೋಕ ಮನಗೂಳಿ ಕಾಂಗ್ರೆಸ್ ಸೇರ್ಪಡೆಯಾದರು. ಈ ಮೂಲಕ ಅಧಿಕೃತವಾಗಿ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವವನ್ನ ಪಡೆದರು.

ಕಾಂಗ್ರೆಸ್ ಸೇರ್ಪಡೆ ವೇಳೆ ವಿಜಯಪುರ ಜಿಲ್ಲಾಧ್ಯಕ್ಷ ರಾಜು ಆಲಗೂರ, ಮಾಜಿ ಸಚಿವರಾದ ಎಂ.ಬಿ ಪಾಟೀಲ, ಶಿವಾನಂದ ಪಾಟೀಲ, ಶಾಸಕ ಯಶವಂತರಾಯಗೌಡ ಪಾಟೀಲ, ಮಾಜಿ ಶಾಸಕ  ಶರಣಪ್ಪ ಸುಣಗಾರ ಸೇರಿ ಅನೇಕರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!