ವಿದ್ಯಾರ್ಥಿ ಮೇಲೆ ಹಲ್ಲೆ, ತನಿಖೆಗೆ ಸಿಎಂ ಸೂಚನೆ

144

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: ಅಂತರ್ ಕಾಲೇಜು ಮಟ್ಟದ ಕಾರ್ಯಕ್ರಮದ ವೇಳೆ ಕನ್ನಡದ ಬಾವುಟ ಹಿಡಿದು ಕುಣಿದ ವಿದ್ಯಾರ್ಥಿ ಮೇಲೆ ಬೆಳಗಾವಿಯಲ್ಲಿ ಹಲ್ಲೆ ಮಾಡಿದ ಪ್ರಕರಣ ಸಂಬಂಧ, ಮುಖ್ಯಮಂತ್ರಿ ಬೊಮ್ಮಾಯಿ ಅವರು ಮಾತನಾಡಿದ್ದಾರೆ. ಈ ಕುರಿತು ತನಿಖೆಗೆ ಸೂಚನೆ ನೀಡಲಾಗಿದೆ. ಯಾರೆ ತಪ್ಪು ಮಾಡಿದರೂ ಕ್ರಮ ತೆಗೆದುಕೊಳ್ಳಲಾಗುತ್ತೆ ಎಂದರು.

ಇನ್ನು ಪೊಲೀಸರು ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿಲ್ಲ ಎಂದಿದ್ದಾರೆ. ಮಹಾರಾಷ್ಟ್ರದವರು ಅನಗತ್ಯ ವಿವಾದ ಮಾಡುತ್ತಿದ್ದಾರೆ ಅಂತಾ ಹೇಳಿದರು. ಟಿಳಕವಾಡಿಯ ಕಾಲೇಜುವೊಂದರಲ್ಲಿ ನಡೆದ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದ್ದು, ಕನ್ನಡಪರ ಸಂಘಟನೆಗಳು ಹೋರಾಟ ಮುಂದುವರೆದಿದೆ.

ಡಿಸಿಪಿ ಅವರು ಹಲ್ಲೆಗೊಳಗಾದ ವಿದ್ಯಾರ್ಥಿಗೆ ಹೊಡೆದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರಂತೆ. ಹೀಗಾಗಿ ಡಿಸಿಪಿ ಅಮಾನತಿಗೆ ಕನ್ನಡಪರ ಸಂಘಟನೆಗಳು ಆಗ್ರಹಿಸಿವೆ.




Leave a Reply

Your email address will not be published. Required fields are marked *

error: Content is protected !!