ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ನಗರದ ಬಿಜಿಎಸ್ ಆಸ್ಪತ್ರೆಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಪ್ರಯುಕ್ತ ಇಬ್ಬರನ್ನ ಬಂಧಿಸಲಾಗಿದೆ. ಬ್ಯಾಡರಹಳ್ಳಿಯ ವೆಂಕಟೇಶ(32) ಹಾಗೂ ನಾಗರಭಾವಿಯ ಪ್ರಶಾಂತ(39) ಅನ್ನೋ ಇಬ್ಬರನ್ನ ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಸಂಬಂಧಿಯೊಬ್ಬರು ಕರೋನಾ ಸೋಂಕಿನಿಂದ ಬಿಜೆಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನ ನೋಡಲು ವಾರ್ಡ್ ಗೆ ಬಿಡುವಂತೆ ಸಿಬ್ಬಂದಿ ಜೊತೆ ಜಗಳವಾಡಿದ್ದಾರೆ. ಇದನ್ನ ಕೇಳುವ ಬಂದ ವೈದ್ಯರನ್ನ ಅವಾಶ್ಯ ಶಬ್ಧಗಳಿಂದ ಬೈದಿದ್ದಾರೆ ಹಾಗೂ ಆಸ್ಪತ್ರೆಗೆ ಆಸ್ತಿಗೆ ಹಾನಿ ಮಾಡಿದ್ದಾರೆ ಎಂದು ಹೇಳಲಾಗ್ತಿದೆ.