ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಕುಂದಾನಗರಿಯಲ್ಲಿ ಒಂದಲ್ಲ ಒಂದು ನೀಚ ಕೃತ್ಯಗಳು ನಡೆಯುತ್ತಿವೆ. ಕೋಟೆ ಕೆರೆ ಪಾರ್ಕ್ ನಲ್ಲಿ ಮಾತನಾಡುತ್ತಾ ಕುಳಿತು ಅಕ್ಕ ಹಾಗೂ ತಮ್ಮನ ಮೇಲೆ ಕಿರಾತಕರು ಹಲ್ಲೆ ನಡೆಸಿದ್ದಾರೆ. ಈ ಸಂಬಂಧ 8 ಆರೋಪಿಗಳನ್ನು ಬಂಧಿಸಲಾಗಿದೆ.
ಈ ಪ್ರಕರಣದಲ್ಲಿ 17 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಭಾನುವಾರ 8 ಮಂದಿಯನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದ್ದು, ಉಳಿದವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಉದ್ಯಾನದಲ್ಲಿ ಮಾತನಾಡುತ್ತಾ ಕುಳಿತ ಅಕ್ಕ ಹಾಗೂ ತಮ್ಮನನ್ನು ಪ್ರೇಮಿಗಳೆಂದು ತಿಳಿದು ಅಪಹರಿಸಿದ್ದಾರೆ. ಅಲ್ಲದೆ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಬೆಳಗಾವಿಯಲ್ಲಿ ದಿನದಿಂದ ದಿನಕ್ಕೆ ಅಮಾನವೀಯ ಘಟನೆಗಳು ಹೆಚ್ಚುತ್ತಿವೆ. ಪುಂಡು ಪೋಕರಿಗಳ ಕಾಟ ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆ ಇಂತವರ ವಿರುದ್ಧ ನಿರ್ಧಾಕ್ಷಣ್ಯ ಕ್ರಮ ತೆಗೆದುಕೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.