ಬಂಟ್ವಾಳ: ಬೆಳ್ಳಂಬೆಳಗ್ಗೆ ತಾಲೂಕಿನ ಮೇರಮಜಲು ಗ್ರಾಮ ಪಂಚಾಯ್ತಿ ಸದಸ್ಯ ಹಾಗೂ ಪತ್ನಿಯ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯ ಯೋಗೇಶ ಪ್ರಭು ಹಾಗೂ ಪತ್ನಿ ಶೋಭಾ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು ಬೆಳ್ಳಗೆ ಸುಮಾರು 4ಗಂಟೆಯ ಟೈಂನಲ್ಲಿ ಮನೆಗೆ ನುಗ್ಗಿದ ದುಷ್ಕರ್ಮಿಗಳ ತಂಡ ತಲ್ವಾರ್ ನಿಂದ ಹಲ್ಲೆ ನಡೆಸಿ ಪರಾರಿಯಾಗಿದೆ. ಗಾಯಾಳುಗಳನ್ನ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರೌಡಿ ಶೀಟರ್ ಪ್ರಸಾದ ಬೆಳ್ವಾಡ ಹಾಗೂ ಆತನ ಸ್ನೇಹಿತರಿಬ್ಬರು ಸೇರಿಕೊಂಡು ಹಲ್ಲೆ ನಡೆಸಿದ್ದಾರೆ ಎಂದು ಯೋಗೇಶ ಪ್ರಭು ದೂರು ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಎಎಸ್ಪಿ ಸೈದುಲ ಅಡಾವತ್, ಸರ್ಕಲ್ ಇನ್ಸ್ ಪೆಕ್ಟರ್ ಟಿ.ಡಿ ನಾಗರಾಜ, ಪಿಎಸ್ಐ ಪ್ರಸನ್ನ ಹಾಗೂ ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.