ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಸಿನಿಮಾ ತಾರೆಯರು ಹಾಗೂ ರಾಜಕೀಯ ನಾಯಕರ ನಡುವೆ ಸ್ನೇಹ, ಪರಿಚಯ ಇರುತ್ತೆ. ಇದು ಮುಂದೆ ಅವರನ್ನು ರಾಜಕೀಯಕ್ಕೆ ಕರೆದುಕೊಂಡ ಬರುತ್ತೆ. ಅಂತಹ ಸಾಕಷ್ಟು ಉದಾಹರಣೆಗಳಿವೆ. ಇದೀಗ ನಟ ಕಿಚ್ಚ ಸುದೀಪ್ ರಾಜಕೀಯಕ್ಕೆ ಬರುತ್ತಾರೆ ಎಂದು ಹೇಳಲಾಗುತ್ತಿದೆ. ಬಿಜೆಪಿ ಮೂಲಕ ನಟ ಸುದೀಪ್ ಪೊಲಿಟಿಕಲ್ ಕರಿಯರ್ ಶುರುವಾಗುತ್ತೆ ಎಂದು ಹೇಳಲಾಗುತ್ತಿದೆ.
ದಕ್ಷಿಣ ಭಾರತ ಚಿತ್ರರಂಗದ ಸ್ಟಾರ್ ನಟ ಅನ್ನೋದು ಒಂದು ಕಡೆ. ವಾಲ್ಮೀಕಿ ಸಮುದಾಯಕ್ಕೆ ಸೇರಿದವರು ಇನ್ನೊಂದು ಕಡೆ. ರಾಜಕೀಯ ಅಂತಾ ಬಂದಾಗ ಜಾತಿ ಲೆಕ್ಕಾಚಾರ ಬಿಟ್ಟು ಮಾತನಾಡಲು ಸಾಧ್ಯವೇ ಇಲ್ಲ. ಬಿಜೆಪಿಯಲ್ಲಿ ಸಾಕಷ್ಟು ಜನ ವಾಲ್ಮೀಕಿ ಸಮುದಾಯಕ್ಕೆ ಸೇರಿ ನಾಯಕರಿದ್ದಾರೆ. ನಟ ಸುದೀಪ್ ಕೆಲವರೊಂದಿಗೆ ಒಳ್ಳೆಯ ಸಂಬಂಧ ಹೊಂದಿದ್ದಾರೆ. ಹೀಗಾಗಿ ಅವರನ್ನು ಬಿಜೆಪಿ ತನ್ನತ್ತ ಸೆಳೆಯುವ ಪ್ರಯತ್ನ ಮಾಡಿತು. ಅದು ಈಗ ಯಶಸ್ವಿಯಾಗಿದೆ ಎಂದು ಹೇಳಲಾಗುತ್ತಿದೆ.
ಕಾಂಗ್ರೆಸ್ ನಾಯಕರು ಸಹ ಸುದೀಪ್ ಭೇಟಿ ಮಾತುಕತೆ ನಡೆಸಿದ್ದರು. ಬಿಜೆಪಿ, ಕಾಂಗ್ರೆಸ್ ಎರಡೂ ಕಡೆಯಿಂದ ನನಗೆ ಆಫರ್ ಬಂದಿದೆ ಎಂದು ನಟ ಸುದೀಪ್ ಈ ಹಿಂದೆ ಹೇಳಿದ್ದರು. ಈಗ ಸುದೀಪ್ ಬಿಜೆಪಿಯತ್ತ ಮುಖ ಮಾಡಿದ್ದಾರೆ ಅನ್ನೋ ಚರ್ಚೆ ಜೋರಾಗಿದ್ದು, ಶೀಘ್ರದಲ್ಲಿ ಇದಕ್ಕೆ ಉತ್ತರ ಸಿಗಲಿದೆ.