ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆ ಸಂಬಂಧ ರಾಜಕೀಯ ಪಕ್ಷಗಳ ತಯಾರಿ ಜೋರಾಗಿದೆ. ಕಾಂಗ್ರೆಸ್, ಬಿಜೆಪಿ ಒಂದೊಂದು ರೀತಿಯ ಪ್ರಚಾರ ನಡೆಸಿವೆ. ಇದರ ನಡುವೆ ಜೆಡಿಎಸ್ 126 ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ ಎಂದು ಹೇಳಲಾಗುತ್ತಿದೆ.
ಪಂಚರತ್ನ ಯಾತ್ರೆಯ ವೇಳೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆಯಂತೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಹಾಲಿ, ಮಾಜಿ ಶಾಸಕರ ಸಭೆಯಲ್ಲಿ ಕ್ಷೇತ್ರವಾರು ಅಭ್ಯರ್ಥಿಗಳ ಆಯ್ಕೆಯಾಗಿದ್ದು, ಪಕ್ಷ ಸಂಘಟನೆ ಸೇರಿ ಸಕ್ರಿಯವಾಗಿ ದುಡಿದವರಿಗೆ ಮಾತ್ರ ಟಿಕೆಟ್ ನೀಡಲಾಗಿದೆಯಂತೆ.
ಕಾಂಗ್ರೆಸ್ ಭಾರತ ಐಕ್ಯತಾ ಯಾತ್ರೆ ಮೂಲಕ ಜನರನ್ನು ಸಂಪರ್ಕಿಸುತ್ತಿದೆ. ಬಿಜೆಪಿ ಜನ ಸಂಕಲ್ಪ ಯಾತ್ರೆ ಶುರು ಮಾಡಿದೆ. ಜೆಡಿಎಸ್ ಪಂಚರತ್ನ ಯಾತ್ರೆಗೂ ಮೊದಲು 126 ಅಭ್ಯರ್ಥಿಗಳ ಪಟ್ಟಿ ರೆಡಿ ಮಾಡಿದ್ದು ಯಾತ್ರೆಯ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗುವ ಪ್ಲಾನ್ ಮಾಡಿದೆ ಎನ್ನಲಾಗುತ್ತಿದೆ.