ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ವಿಧಾನಸಭೆ ಅಧಿವೇಶನ ಶುರುವಾಗಿದೆ. ಮೊದಲಿಗೆ ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಕ ಸಭೆಯನ್ನು, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಂಡಿಸಿದ್ದು, ಸಿಎಂ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ ಸೇರಿ ಸಚಿವರು, ಶಾಸಕರು ಮಾತನಾಡುತ್ತಿದ್ದಾರೆ.
ಸಚಿವರಾಗಿದ್ದ ಉಮೇಶ್ ಕತ್ತಿ, ಮಾಜಿ ಸಚಿವರಾಗಿದ್ದ ರಘುಪತಿ ಭಟ್, ಪ್ರಭಾಕರ್ ರಾಣೆ, ಮಾಜಿ ಶಾಸಕರಾದ ಜಿ.ವಿ ಶ್ರೀರಾಮರೆಡ್ಡಿ, ಕೆ.ಕೆಂಪೇಗೌಡ, ಯಾದವ್ ರಾವ್, ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಹಾಗೂ ಬ್ರಿಟನ್ ರಾಣಿಯಾಗಿದ್ದ 2ನೇ ಎಲಿಜಿಬೆತ್ ಅವರಿಗೆ ಸಂತಾಪ ಸೂಚಿಸಲಾಗುತ್ತಿದೆ.