ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಇಂದಿನಿಂದ ಮುಂದಿನ 10 ದಿನಗಳ ಮಳೆಗಾಲದ ಅಧಿವೇಶನ ಶುರುವಾಗುತ್ತಿದೆ. ಪ್ರತಿಪಕ್ಷಗಳು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಇದರ ನಡುವೆ ಬೆಲೆ ಏರಿಕೆಯನ್ನು ಖಂಡಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಸೇರಿದಂತೆ ಇತರೆ ನಾಯಕರು ಎತ್ತಿನಗಾಡಿ ಏರಿ ವಿಧಾನಸೌಧಕ್ಕೆ ಬರಲು ಸಿದ್ಧತೆ ನಡೆಸಿದ್ದಾರೆ.
ಮೀಸಲಾತಿ, ಹಿಂದುಳಿದ ಆಯೋಗದ ಜಾತಿ ಗಣತಿ, ಮೈಸೂರು ಘಟನೆ, ಬೆಲೆ ಏರಿಕೆ, ಕೋವಿಡ್ ಸಾವಿನ ಅಂಕಿಅಂಶ, ರಾಷ್ಟ್ರೀಯ ಶಿಕ್ಷಣ ನೀತಿ ಸೇರಿದಂತೆ ಹಲವು ಗಂಭೀರ ವಿಚಾರಗಳ ಮೇಲೆ ಸಿಎಂ ಬೊಮ್ಮಾಯಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ತಯಾರಾಗಿವೆ. ಆದರೆ, ಇವುಗಳ ಬಗ್ಗೆ ಗಂಭೀರವಾದ ಚರ್ಚೆ ನಡೆಯುತ್ತಾ ಅಥವ ಜಟಾಪಟಿಯಲ್ಲಿಯೇ ಮುಗಿದು ಹೋಗುತ್ತಾ ಕಾದು ನೋಡಬೇಕಿದೆ.
ಇನ್ನು ಅಧಿವೇಶನದ ಹಿನ್ನೆಲೆಯಲ್ಲಿ ಬೆಳಗ್ಗೆ 9ಗಂಟೆಯಿಂದ ರಾತ್ರಿ 9ಗಂಟೆಯ ತನಕ ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಹೆಚ್ಚು ಜನರು ಸೇರುವಂತಿಲ್ಲ. ಪ್ರತಿಭಟನೆ ನಡೆಸುವಂತಿಲ್ಲವೆಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.