ನವದೆಹಲಿ: ಆಗಸ್ಟ್ 16 ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಮೊದಲ ಪುಣ್ಯತಿಥಿಯಾಗಿದೆ. ಅಂದು ಬಿಜೆಪಿ ಮಾಜಿ ಪ್ರಧಾನಿಗೆ ಗೌರವ ಸಲ್ಲಿಸಲು ನಿರ್ಧಾರ ಮಾಡಿದೆ. ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ವಾಜಪೇಯಿ ಅವರ ಮೊದಲ ಪುಣ್ಯತಿಥಿಯಂದು ಬಿಜೆಪಿ ಕಾರ್ಯಕರ್ತರೆಲ್ಲರೂ ಅವರನ್ನ ನೆನಪಿಸಿಕೊಳ್ಳುವಂತಹ ಕಾರ್ಯಕ್ರಮಗಳನ್ನ ಆಯೋಜಿಸುವ ತಿರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗ್ತಿದೆ. ಅಂದು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಜಿಲ್ಲಾ ಘಟಕಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮ ನಡೆಸಲಾಗುವುದು ಅನ್ನೋದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಆಗಸ್ಟ್ 16, 2018ರಂದು ಅಟಲ್ ಬಿಹಾರಿ ವಾಜಪೇಯಿ ನಿಧನ ಹೊಂದಿದ್ರು.