ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಒಡಿಶಾದಲ್ಲಿ ಸಂಭವಸಿದ ಅತ್ಯಂತ ಭೀಕರ ರೈಲು ಅಪಘಾತದಲ್ಲಿ 288 ಪ್ರಯಾಣಿಕರು ಮೃತಪಟ್ಟಿದ್ದು, 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಘಟನೆಯಿಂದಾಗಿ ಹೌರಾದಲ್ಲಿ ಸಿಲುಕೊಂಡಿದ್ದ ರಾಜ್ಯದ ಕ್ರೀಡಾಪಟುಗಳು ಪಾರಾಗಿ ಬಂದಿದ್ದಾರೆ.
24 ರಂದು ರಾಜ್ಯದ ವಿವಿಧ ಭಾಗಗಳಿಂದ 34 ಕ್ರೀಡಾಪಟುಗಳು ಹಾರಾಗೆ ತೆರಳಿದ್ದರು. ಇದರಲ್ಲಿ 23 ಕ್ರೀಡಾಪಟುಗಳನ್ನು ಸುರಕ್ಷಿತವಾಗಿ ಕರೆದುಕೊಂಡು ಬರಲಾಗಿದೆ. ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಅವರನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ಸ್ವಾಗತಿಸಿದರು.
ವಾಲಿಬಾಲ್ ಪಂದ್ಯ ಮುಗಿಸಿಕೊಂಡು ವಾಪಸ್ ಬರುವಾಗ ರೈಲು ದುರಂತದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದರು. ಮೊದಲ ಹಂತದಲ್ಲಿ 23 ಕ್ರೀಡಾಪಟುಗಳು ಬಂದಿದ್ದು, 2ನೇ ಹಂತದಲ್ಲಿ ಉಳಿದ ಕ್ರೀಡಾಪಟುಗಳನ್ನು ಕರೆದುಕೊಂಡು ಬರಲಾಗುತ್ತಿದೆ.