ಮೈಸೂರಿನಲ್ಲಿ ಇಬ್ಬರಿಗೆ ಚಾಕು ಇರಿತ, ಓರ್ವ ಸಾವು

229

ಪ್ರಜಾಸ್ತ್ರ ಅಪರಾಧ ಸುದ್ದಿ

ಮೈಸೂರು: ಹಳೆ ವಷಮ್ಯದ ಹಿನ್ನೆಲೆಯಲ್ಲಿ ಇಬ್ಬರಿಗೆ ಚಾಕು ಇರಿಯಲಾಗಿದ್ದು, ಇದರಲ್ಲಿ ಓರ್ವ ಮೃತಪಟ್ಟ ಘಟನೆ ಕೆ.ಎಂ ಹಳ್ಳಿಯಲ್ಲಿ ನಡೆದಿದೆ. ಕಳೆದ ರಾತ್ರಿ ಅಶ್ವತ್ಥಕಟ್ಟೆಯ ಬಳಿ ವೆಂಕಟೇಶ್ ಹಾಗೂ ನವೀನ್ ಎಂಬುವರು ನಿಂತಿದ್ದರು. ಇವರ ಮೇಲೆ ಶೆಟ್ಟಿ ಎಂಬಾತ ಚಾಕುವಿನಿಂದ ಇರಿದಿದ್ದಾನೆ.

ಈ ವೇಳೆ ವೆಂಕಟೇಶ್ ಸಹಾಯಕ್ಕೆ ಬಂದ ನವೀನ್ ಮೇಲೆ ಚಂದ್ರು ಅಲಿಯಾಸ್ ಚಿಕನ್ ಚಂದ್ರು ಚಾಕುವಿನಿಂದ ಇರಿದಿದ್ದಾನೆ. ಗಾಯಗೊಂಡವರನ್ನು ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಿಸದೆ ವೆಂಕಟೇಶ್ ಮೃತಪಟ್ಟಿದ್ದಾನೆ. ಶೆಟ್ಟಿ ಹಾಗೂ ಚಂದ್ರು ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!