ವಿಜಯಪುರದಲ್ಲಿ ಯುವಕನ ಮೇಲೆ ಗಂಭೀರ ಹಲ್ಲೆ

216

ಪ್ರಜಾಸ್ತ್ರ ಅಪರಾಧ ಸುದ್ದಿ

ವಿಜಯಪುರ: ಗುಮ್ಮಟನಗರಿಯಲ್ಲಿ ಯುವಕನ ಮೇಲೆ ದುಷ್ಕರ್ಮಿಗಳು ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಕಳೆದ ರಾತ್ರಿ ನಡೆದಿದೆ. ಪಿರೋಜ್ ಮುಲ್ಲಾ(32) ಅನ್ನೋ ಯುವಕನ ಮೇಲೆ ತಲ್ವಾರ್ ನಿಂದ ಹಲ್ಲೆ ಮಾಡಲಾಗಿದೆ.

ನಗರದ ಕೋರ್ಟ್ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ. ಪಿರೋಜ್ ಮುಲ್ಲಾ ಹೂವಿನ ವ್ಯಾಪಾರ ಮಾಡುತ್ತಾನೆ. ಜಲನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ತನಿಖೆ ನಡೆಸಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!