ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೆ ಮಚ್ಚು, ಲಾಂಗ್ ಝಳಪಿಸಿದೆ. ಮಾಜಿ ಮೇಯರ್ ಮತ್ತು ಅವರ ಗ್ಯಾಂಗ್ ನಿಂದ ಅಮಾಯಕರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಮಾಜಿ ಮೇಯರ್ ವೆಂಕಟೇಶ ಮೇಸ್ತ್ರಿ ಹಾಗೂ ಅವನ ಬೆಂಬಲಿಗರು ದಬ್ಬಾಳಿಕೆ ಮಾಡಿ ಹಲ್ಲೆ ಮಾಡಿದ್ದಾರೆ ಅಂತಾ ಹೇಳಲಾಗ್ತಿದೆ. ಹುಬ್ಬಳ್ಳಿಯ ತೊರವಿ ಹಕ್ಕಲದಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ದೇವೇಂದ್ರಪ್ಪ ಆಲಕುಂಟೆ ಕುಟುಂಬದ ಮೇಲೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಮಾಜಿ ಮೇಯರ್ ವೆಂಕಟೇಶ ಮೇಸ್ತ್ರಿ ಹಾಗೂ ಆತನ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದೆ. ಹಲ್ಲೆ ನಡೆಸಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಲಾಂಗು, ಮಚ್ಚು, ತಲ್ವಾರ ಮತ್ತು ಬ್ಯಾಟ್ಗಳಿಂದ ಹಲ್ಲೆ ಮಾಡಿದ ದುಷ್ಕರ್ಮಿಗಳು.
ಸಿಸಿಟಿವಿಯಲ್ಲಿ ಹಲ್ಲೆ ನಡೆಸಿದ ದೃಶ್ಯಗಳು ಇದ್ದರೂ, ವೆಂಕಟೇಶ ಮೇಸ್ತ್ರಿಯನ್ನ ಕಮರಿಪೇಟ್ ಪೊಲೀಸರು ಬಿಟ್ಟು ಕಳುಹಿಸಿದ್ದಾರೆ ಎನ್ನಲಾಗ್ತಿದೆ. ಮಾಜಿ ಮೇಯರ್ ವೆಂಕಟೇಶ ಮೇಸ್ತ್ರಿ ಮಾಜಿ ಸಿಎಂ, ಶಾಸಕ ಜಗದೀಶ್ ಶೆಟ್ಟರ್ ಅವರ ಆಪ್ತ ಎನ್ನಲಾಗ್ತಿದೆ.