ಪ್ರಜಾಸ್ತ್ರ ಸುದ್ದಿ
ಚಿಕ್ಕಮಗಳೂರು: ಖಾಸಗಿ ಆಸ್ಪತ್ರೆ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ಮಾಡಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ತರಿಕೇರಿ ಅಗ್ನಿಶಾಮಕ ಠಾಣೆ ಹತ್ತಿರ ಈ ಘಟನೆ ನಡೆದಿದ್ದು, ಡಾ.ದೀಪಕ ಎಂಬುವರು ಗಾಯಗೊಂಡಿದ್ದಾರೆ.
ಆಸ್ಪತ್ರೆಯಿಂದ ಮನೆಗೆ ಸೈಕಲ್ ಮೇಲೆ ಹೋಗುತ್ತಿದ್ದಾಗ ಯಾರೋ ದುಷ್ಕರ್ಮಿಗಳು ಮೆಚ್ಚಿನಿಂದ ಹಲ್ಲೆ ಮಾಡಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡ್ತಿದ್ದ ಅವರನ್ನ, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಲ್ಲೆ ಯಾರು ಮಾಡಿದ್ದು, ಯಾವ ಕಾರಣಕ್ಕೆ ಮಾಡಿದ್ದು ಅನ್ನೋದರ ತನಿಖೆ ನಡೆಯುತ್ತಿದೆ. ಈ ಬಗ್ಗೆ ತರಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.