ಸ್ವಪಕ್ಷೀಯರಿಂದಲೇ ಶಾಸಕ ರೇಣುಕಾಚಾರ್ಯ ಪಿಎ ಮೇಲೆ ಹಲ್ಲೆ?

174

ಪ್ರಜಾಸ್ತ್ರ ಸುದ್ದಿ

ದಾವಣಗೆರೆ: ಹೊನ್ನಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಪಿಎ ಪ್ರಜ್ವಲ್ ಮೇಲೆ ಸ್ವಪಕ್ಷದವರಿಂದಲೇ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಕಳೆದ ರಾತ್ರಿ ಸುಮಾರು 10.30ರ ಸಮಯದಲ್ಲಿ ಪಟ್ಟಣದಲ್ಲಿ ಹಲ್ಲೆ ಮಾಡಲಾಗಿದೆ.

ಪ್ರಜ್ವಲ್ ನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿ ಪ್ರಜ್ವಲ್ ಆರೋಗ್ಯ ವಿಚಾರಿಸಿದ ನಂತರ ಮಾತನಾಡಿದ ಶಾಸಕ ರೇಣುಕಾಚಾರ್ಯ, ಹಲ್ಲೆಕೋರರನ್ನು ಕೂಡಲೇ ಬಂಧಿಸುವಂತೆ ಹೇಳಿದ್ದಾರೆ. ಆದರೆ, ಶಾಸಕರ ಆಪ್ತ ಸಹಾಯಕನ ಮೇಲೆ ಸ್ವಪಕ್ಷೀಯರಿಂದಲೇ ಹಲ್ಲೆ ನಡೆಸಲಾಗಿದೆ ಎನ್ನಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!