ಆಲಮೇಲದಲ್ಲಿ ಬ್ಯಾಂಕ್ ಕಳ್ಳತನಕ್ಕೆ ಯತ್ನ

365

ಸಿಂದಗಿ: ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಆಲಮೇಲ ಪಟ್ಟಣದ ಬ್ಯಾಂಕ್ ವೊಂದರಲ್ಲಿ ಕಳ್ಳತನಕ್ಕೆ ಯತ್ನಿಸಲಾಗಿದೆ. ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನ ಹಿಂಬದಿ ಬಾಗಿಲಿನಿಂದ ಬಂದ ಮುಸುಕುದಾರಿಗಳು ಕಳ್ಳತನಕ್ಕೆ ಯತ್ನಿಸಿದ್ದಾರೆ.

ಬ್ಯಾಂಕ್ ಒಳಗೆಯಿದ್ದ ಕಿಟಕಿ, ಸಿಸಿ ಕ್ಯಾಮೆರಾ ಒಡೆಯಲು ಯತ್ನಿಸಿದ್ದಾರೆ. ಅದು ಸಾಧ್ಯವಾಗಿಲ್ಲ. ಅಲ್ದೇ, ಬ್ಯಾಂಕ್ ನಲ್ಲಿದ್ದ ಲಕ್ಷಾಂತರ ರೂಪಾಯಿ ಕದಿಯಲು ನಡೆಸಿದ ಯತ್ನಗಳೆಲ್ಲವೂ ವಿಫಲವಾದ ಪರಿಣಾಮ ದಾಖಲಾತಿಗಳು ಹರಿದು ಹಾಕಿ ಎಸ್ಕೇಪ್ ಆಗಿದ್ದಾರೆ. ಇದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಆಲಮೇಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಜಿಲ್ಲಾ ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.




Leave a Reply

Your email address will not be published. Required fields are marked *

error: Content is protected !!