ಪ್ರಜಾಸ್ತ್ರ ಸುದ್ದಿ
ಚಿಕ್ಕಬಳ್ಳಾಪುರ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅದರಲ್ಲಿ 14 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಚಿಂತಾಮಣಿ ತಾಲೂಕಿನ ಅಂಬಾಜಿ ದುರ್ಗ ಹೋಬಳಿಯ ನಾರಾಯಣಹಳ್ಳಿ ಈ ಘಟನೆ ನಡೆದಿದೆ. 14 ವರ್ಷದ ಮುರುಳಿ ಮೃತಪಟ್ಟಿದ್ದಾನೆ.
ಮಂಜುನಾಥ(45), ಪತ್ನಿ ಹನುಮಕ್ಕ(35) ಹಾಗೂ ಮುನಿರಾಜು(20), ಮುರುಳಿ(14) ವಿಷ ಸೇವಿಸಿದ್ದರು. ಮೂವರ ಸ್ಥಿತಿಯೂ ಗಂಭೀರವಾಗಿದ್ದು, ಕೋಲಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಂತಾಮಣಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆ ಯತ್ನಕ್ಕೆ ಕಾರಣಕ್ಕೆ ತಿಳಿದು ಬಂದಿಲ್ಲ.