ಪ್ರಜಾಸ್ತ್ರ ಸುದ್ದಿ
ಚಿಕ್ಕಮಗಳೂರು: ಜೀವನದಲ್ಲಿ ಮಾನಸಿಕವಾಗಿ ನೊಂದಿದ್ದೇವೆ ಎಂದು ವಾಯ್ಸ್ ಮೆಸೇಜ್ ಕಳುಹಿಸಿ ಒಂದೇ ಕುಟುಂಬದ ನಾಲ್ವರು ನಾಲೆಗೆ ಹಾರಿದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹಳೇಜೋಡಿಕಟ್ಟೆ ಗ್ರಾಮದ ಮಂಜು, ಪತ್ನಿ ನೀತು, ಮಗ ಧ್ಯಾನ್ ಹಾಗೂ ಮಂಜು ತಾಯಿ ಸುನಂದಮ್ಮ ಅವರು ಕಾರು ಸಮೇತ ನಾಲೆಗೆ ಹಾರಿದ್ದಾರೆ. ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ನೀತು ಹಾಗೂ ಧ್ಯಾನ್ ಅವರನ್ನ ರಕ್ಷಣೆ ಮಾಡಿದ್ದಾರೆ. ಮಂಜು ಹಾಗೂ ಅವರ ತಾಯಿ ಸುನಂದಮ್ಮನವರ ಶೋಧ ನಡೆಸಲಾಗ್ತಿದೆ.
ಸ್ಥಳಕ್ಕೆ ಎಸ್ಪಿ ಅಕ್ಷಯ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮಂಜು ಹಾಗೂ ಅವರ ತಾಯಿ ಸುನಂದಮ್ಮ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಅವರ ಪತ್ತೆ ಕಾರ್ಯ ನಡೆದಿದೆ.