ಅತ್ತಿಬೆಲೆ ಪಟಾಕಿ ಗೋದಾಮು ಸ್ಫೋಟ: ಸಾವಿನ ಸಂಖ್ಯೆ 17ಕ್ಕೆ ಏರಿಕೆ

233

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕ ತಮಿಳುನಾಡು ಗಡಿಗೆ ಹೊಂದಿಕೊಂಡಂತೆ ಇರುವ ಅತ್ತಿಬೆಲೆ ಹತ್ತಿರದ ಪಟಾಕಿ ಗೋದಾಮಿನಲ್ಲಿ ಅಕ್ಟೋಬರ್ 7 ಶನಿವಾರ ಮಧ್ಯಾಹ್ನ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಇದೀಗ 17ಕ್ಕೆ ಏರಿಕೆಯಾಗಿದೆ.

ಘಟನೆ ನಡೆದ ದಿನವೇ 13 ಜನರು ಪ್ರಾಣ ಕಳೆದುಕೊಂಡಿದ್ದರು. ಗಂಭೀರವಾಗಿ ಗಾಯಗೊಂಡವರಲ್ಲಿ ಒಬ್ಬೊಬ್ಬರಾಗಿ ಮೃತಪಡುತ್ತಿದ್ದು, ಬುಧವಾರ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಹೀಗಾಗಿ ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ತಮಿಳುನಾಡಿನ ರಾಜೇಶ್ ಮೃತ ಯುವಕನಾಗಿದ್ದಾನೆ.

ಅಕ್ರಮವಾಗಿ ಪಟಾಕಿ ಗೋದಾಮು ನಡೆಸುತ್ತಿದ್ದ ಮಾಲೀಕರಿಬ್ಬರನ್ನು ಬಂಧಿಸಲಾಗಿದೆ. ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸುತ್ತಿದೆ. ಮೃತಪಟ್ಟವರ ಕುಟುಂಬಗಳಿಗೆ ಕರ್ನಾಟಕ ಹಾಗೂ ತಮಿಳುನಾಡು ಸರ್ಕಾರದಿಂದ ಪರಿಹಾರ ಘೋಷಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!