ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮಕ್ಕೆ ಈ ಬಾರಿ ನಿರ್ಬಂಧ ಹೇರಲಾಗಿದೆ. ಕರೋನಾ ಸೋಂಕು ಮತ್ತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಗೌರವ ಗುಪ್ತಾ ತಿಳಿಸಿದ್ದಾರೆ.
ಆಗಸ್ಟ್ 15ರಂದು ನಡೆಯುವ ಸ್ವತಂತ್ರ ದಿನಾಚರಣೆ ಸಂದರ್ಭದಲ್ಲಿ ಈ ಬಾರಿ ಯಾವುದೇ ಸಾಂಸ್ಕೃತಿಕ ಚಟುವಟಿಕೆಗಳು ನಡೆಯುವುದಿಲ್ಲ. ಸಿಎಂ ಬೊಮ್ಮಾಯಿ ಧ್ವಜಾರೋಹಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಗಣ್ಯ ವ್ಯಕ್ತಿಗಳು, ಆಹ್ವಾನಿತರು ಮಾತ್ರ ಭಾಗವಹಿಸಲಿದ್ದಾರೆ. ಆದ್ರೆ, ಸಾರ್ವಜನಿಕರಿಗೆ ಅವಕಾಶವಿಲ್ಲವೆಂದು ಹೇಳಿದ್ದಾರೆ.