ಐಟಿ ಸಿಟಿಯಲ್ಲಿ ಆಟೋ ಪಲ್ಟಿ, ಕಾರು ಡಿಕ್ಕಿ: ಮೂವರ ಸಾವು

222

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದೆ. ಅದಕ್ಕೆ ಕಾರೊಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ನಗರದ ಚಿಕ್ಕಜಾಲ ಬಳಿಯ ಬಾಗಲೂರಿನಲ್ಲಿ ಈ ಘಟನೆ ನಡೆದಿದೆ.

ಆಟೋ ಚಾಲಕ ಕಿರಣ(26), ಪ್ರಯಾಣಿಕರಾದ ರಾಹುಲ(21), ಅನ್ವರ ಹುಸೇನ(28) ಮೃತಪಟ್ಟ ದುರ್ದೈವಿಗಳು. ಇನ್ನೊಬ್ಬ ಪ್ರಯಾಣಿಕನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಚಿಕ್ಕಜಾಲ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!